ಚಿತ್ರದುರ್ಗದಲ್ಲಿ ನಡೆಯಲಿರುವ ಅಮೃತ ಸಾಹಿತ್ಯ ಸಮ್ಮೇಳನಕ್ಕೆ ಶೋಷಿತ ಸಮುದಾಯದವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡದೇ ಇರುವ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕ್ರಮವನ್ನು ವಿರೋಧಿಸಿದ್ದ ಕೆಲವು ಅಹಿಂದ ಸಂಘಟನೆಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿದಿವೆ. ಮಂಗಳವಾರ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಅಹಿಂದ ಮುಖಂಡ ಮುರುಘರಾಜೇಂದ್ರ ಒಡೆಯರ್ ಈ ವಿಷಯ ಪ್ರಕಟಿಸಿದರು. ಅಖಿಲ ಭಾರತ 75ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ಣ ಪ್ರಮಾಣದ ಸಹಕಾರ ನೀಡುವುದಾಗಿ ಹೇಳಿದರು. ಕಸಾಪ ರಾಜ್ಯ ಘಟಕದ ಅಧ್ಯಕ್ಷರಾದ ಶ್ರೀ ಡಾ. ನಲ್ಲೂರು ಪ್ರಸಾದ್ ರವರೊಂದಿಗೆ ಸುಧೀರ್ಘ ಚರ್ಚೆ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ. ಇದಲ್ಲದೇ ನಾಡಿನ ಶೋಷಿತ ವರ್ಗ ಪ್ರತಿನಿಧಿಸುವ ಸಾಹಿತಿಗಳು ಪರ್ಯಾಯ ಬೇಡವೆಂದು ಮನವಿ ಮಾಡಿಕೊಂಡಿದ್ದರು. ಈ ಎಲ್ಲರ ಮಾತಿಗೆ ಮನ್ನಣೆ ನೀಡಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು. ಜನವರಿ 11 ರಂದು ಅಹಿಂದ ವತಿಯಿಂದ ಮೈಸೂರಿಗೆ ತೆರಳಿ ಅಮೃತ ಸಮ್ಮೇಳನಾಧ್ಯಕ್ಷರಾದ ಎಲ್.ಬಸವರಾಜು ರವರನ್ನು ಅಭಿನಂದಿಸಲಾಗುವುದು ಎಂದರು.
ಗುರುವಾರ, ಜನವರಿ 8, 2009
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ